Saturday, April 26, 2025
HomeJOB NOTIFICATIONPreparation for Gazetted Probationary 276 Posts 2023-2024‌‌

Preparation for Gazetted Probationary 276 Posts 2023-2024‌‌

  ಗೆಜೆಟೆಡ್‌ ಪ್ರೊಬೇಷನರಿ 276 ಹುದ್ದೆಗಳ ಭರ್ತಿಗೆ ಸಿದ್ಧತೆ 2023 – 2024


 ಅಧಿಸೂಚನೆ ಸಂಪೂರ್ಣ ಮಾಹಿತಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ವಯ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬಹುದಾದ ಕಾರ್ಯನಿರ್ವಾಹಕ ಅಧಿಕಾರಿ / ಸಹಾಯಕ ಕಾರ್ಯದರ್ಶಿ (ಗೆಜೆಟೆಡ್ ಪ್ರೊಬೆಷನರಿ) ಅಧಿಕಾರಿ ಸಂಖ್ಯೆ : 110. ಅವುಗಳ ಪೈಕಿ ಪ್ರಸ್ತುತ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಬಹುದಾದ ಕಾರ್ಯನಿರ್ವಾಹಕ ಅಧಿಕಾರಿ / ಸಹಾಯಕ ಕಾರ್ಯದರ್ಶಿ ಖಾಲಿ ಹುದ್ದೆಗಳ ಸಂಖ್ಯೆ 59 ಇವೆ. ಈ ಸದರಿ ಹುದ್ದೆಗಳನ್ನು ಭರ್ತಿ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ವಿಧಾನ ಪರಿಷತ್ತಿನಲ್ಲಿ ಹೇಳಿದ್ದಾರೆ.

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಕೆಎಎಸ್‌ (ಕರ್ನಾಟಕ ನಾಗರಿಕ ಸೇವೆ) ಸೇರಿದಂತೆ ಗ್ರೂಪ್‌ ‘ಎ’ ಮತ್ತು ಗ್ರೂಪ್‌ ‘ಬಿ’ ವೃಂದದ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ಒಟ್ಟು 276 ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

ಈ ಪೈಕಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಲ್ಲಿನ (ಸೇವೆಗಳು–2) ಸಹಾಯಕ ಆಯುಕ್ತ (ಕಿರಿಯ ಶ್ರೇಣಿ) 20 ಹುದ್ದೆಗಳು ಸೇರಿ ಒಟ್ಟು 105 ಹುದ್ದೆಗಳು ಗ್ರೂಪ್‌ ‘ಎ’ನಲ್ಲಿವೆ. ಕಂದಾಯ ಇಲಾಖೆಯಲ್ಲಿನ ತಹಶೀಲ್ದಾರ್‌ (ಗ್ರೇಡ್– 2) 26 ಹುದ್ದೆಗಳು ಸೇರಿ ಒಟ್ಟು 171 ಹುದ್ದೆಗಳು ಗ್ರೂಪ್‌ ‘ಬಿ’ ವೃಂದಕ್ಕೆ ಸೇರಿವೆ.

ಎಲ್ಲ ಇಲಾಖೆಗಳಿಂದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಡಿಪಿಎಆರ್) ಖಾಲಿ ಹುದ್ದೆಗಳ ಮಾಹಿತಿಯನ್ನು ಸಂಗ್ರಹಿಸಿದೆ. ಈ ಹುದ್ದೆಗಳನ್ನು ಭರ್ತಿ ಮಾಡಲು ಸದ್ಯದಲ್ಲೇ ನೇಮಕಾತಿ ಪ್ರಾಧಿಕಾರವಾದ ಕರ್ನಾಟಕ ಲೋಕಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಪ್ರಸ್ತಾವ ಸಲ್ಲಿಕೆ ಆಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.

2017ನೇ ಸಾಲಿನಲ್ಲಿ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ 106 ಹುದ್ದೆಗಳಿಗೆ ನೇಮಕಾತಿ ನಡೆದಿತ್ತು. ಆ ಸಾಲಿನ ನೇಮಕಾತಿಯಲ್ಲಿ ಸಹಾಯಕ ಆಯುಕ್ತ ಮತ್ತು ಡಿವೈಎಸ್‌ಪಿ ಹುದ್ದೆಗಳನ್ನು ಭರ್ತಿ ಮಾಡಿರಲಿಲ್ಲ. ನಂತರ ಸರ್ಕಾರ ಹೊಸತಾಗಿ ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಗೆ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಹೀಗಾಗಿ, 4 ಲಕ್ಷಕ್ಕೂ ಹೆಚ್ಚು ಉದ್ಯೋಗಾಕಾಂಕ್ಷಿಗಳು ನೇಮಕಾತಿ ಅಧಿಸೂಚನೆಯ ನಿರೀಕ್ಷೆಯಲ್ಲಿದ್ದಾರೆ.

‘ಕೋವಿಡ್‌– 19  ಸಾಂಕ್ರಾಮಿಕ ರೋಗ ಹಾಗೂ ಇತರ ಆಡಳಿತಾತ್ಮಕ ಕಾರಣಗಳಿಂದಾಗಿ ಸುಮಾರು ನಾಲ್ಕು ವರ್ಷಗಳಿಂದ ಯಾವುದೇ ಗೆಜೆಡೆಟ್‌ ಪ್ರೊಬೇಷನರಿ ಹುದ್ದೆ ಭರ್ತಿ ಮಾಡಲು ಸಾಧ್ಯವಾಗಿಲ್ಲ’ ಎಂದು ವಿಧಾನ ಪರಿಷತ್‌ನಲ್ಲಿ ಬಿಜೆಪಿಯ ಎಚ್.ಎಸ್‌. ಗೋಪಿನಾಥ್‌ ಅವರ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಿದ್ದಾರೆ.

ಈ ಮಧ್ಯೆ, ಹುದ್ದೆಗಳ ಭರ್ತಿಗೆ ಹೊರಡಿಸುವ ಅಧಿಸೂಚನೆಯಲ್ಲಿ ಎಲ್ಲ ಅರ್ಹ ಅಭ್ಯರ್ಥಿಗಳಿಗೆ ಒಂದು ಬಾರಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಿ ಅವಕಾಶ ಕಲ್ಪಿಸಬೇಕು ಎಂದು ಹುದ್ದೆ ಆಕಾಂಕ್ಷಿಗಳು ಮುಖ್ಯಮಂತ್ರಿಗೆ ಬೇಡಿಕೆ ಸಲ್ಲಿಸಿದ್ದಾರೆ.

ವಿಶೇಷ ಸೂಚನೆ: ಈ ಹುದ್ದೆಗಳಿಗೆ ಇನ್ನೂ ಅರ್ಜಿ ಆಹ್ವಾನಿಸಿಲ್ಲ & ಇದು ನೇಮಕಾತಿ ಅಧಿಸೂಚನೆಯೂ ಅಲ್ಲ.!! ಆದರೆ ಇದು “ಮುಂಬರುವ ನೇಮಕಾತಿಯ ಮಾಹಿತಿ” ಎಂಬುದನ್ನು ಸ್ಪಷ್ಟಪಡಿಸುತ್ತಾ, ಈ ಮಾಹಿತಿಯನ್ನು ಸರಿಯಾಗಿ ಓದಿಕೊಳ್ಳಲು ಸೂಚಿಸಲಾಗಿದೆ.!!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments